ಗದಗದ ನಗರದ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿದ ವಿಜಯ ಸಿಂಧೂರ ಸಂಪಾದಕರಿಗೆ ಕಲ್ಲಯ್ಯ ಅಜ್ಜನವರು “ವಿಜಯ ಸಿಂಧೂರ” ಪತ್ರಿಕೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು.

ಸಮಾಜಮುಖಿ ಸುದ್ದಿಗಳನ್ನು ಜನತೆಗೆ ತಲುಪಿಸುವಲ್ಲಿ ಈ ಪತ್ರಿಕೆಯ ಪಾತ್ರ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಪತ್ರಿಕೆ ನಿರಂತರವಾಗಿ ಸತ್ಯನಿಷ್ಠ ಮತ್ತು ನಿಷ್ಪಕ್ಷಪಾತ ಸುದ್ದಿಗಳನ್ನು ಪ್ರಕಟಿಸುತ್ತಿದ್ದು, ಗ್ರಾಮೀಣ ಪ್ರದೇಶಗಳ ಸಮಸ್ಯೆಗಳು ಹಾಗೂ ಸಾಧನೆಗಳನ್ನು ಬೆಳಕಿಗೆ ತರುತ್ತಿರುವುದು ಶ್ಲಾಘನೀಯವಾಗಿದೆ ಎಂದು ಕಲ್ಲಯ್ಯ ಅಜ್ಜನವರು ಹೇಳಿದರು.
ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಕಾರ್ಯಕ್ರಮಗಳನ್ನು ಕೈಗೊಂಡು, ಸಮಾಜದ ಅಭಿವೃದ್ಧಿಗೆ ಕೈಜೋಡಿಸಲಿ ಎಂದು ಹಾರೈಸಿದರು.
