ವಿಜಯ ಸಿಂಧೂರ ರೋಣ
ಸಾಮೂಹಿಕ ವಿವಾಹಗಳು ದುಂದುವೆಚ್ಚಕ್ಕೆ ಕಡಿವಾಣ ಹಾಕುದುವುದಲ್ಲದೆ, ನೆಮ್ಮದಿ ಜೀವನಕ್ಕೆ ನಾಂದಿ ಹಾಡುತ್ತವೆ’ ಎಂದು ರೋಣ ತಾಲೂಕು ಗ್ಯಾರಂಟಿ ಸಮೀತಿ ಅಧ್ಯಕ ಮಿಥುನ್ ಪಾಟೀಲ ಹೇಳಿದರು.
ಅವರು ಶುಕ್ರವಾರ ತಾಲೂಕಿನ ಅಬ್ಬಿಗೇರಿ ಗ್ರಾಮದ ಅನ್ನದಾನಿಶ್ವರ ಶಾಖಾಮಠದಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.

‘ವಧು–ವರರು ದಾಂಪತ್ಯ ಜೀವನವನ್ನು ಮಾದರಿಯಾಗಿ ನಡೆಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು’ ಎಂದರು.
ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮದುವೆ ಕಬ್ಬಿಣದ ಕಡಲೆ ಇದ್ದಂತೆ. ಉಳ್ಳವರು ಸಾಮೂಹಿಕ ವಿವಾಹದಂತಹ ಸತ್ಕಾರ್ಯಕ್ಕೆ ಮುಂದಾಗಿ ಬಡವ, ಶ್ರೀಮಂತ, ಮೇಲು, ಕೀಳು ಎನ್ನದೆ ಎಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ನಡೆಸುವ ಎಲ್ಲಾರೂ ಸತ್ಕಾರ ಮಾಡಬೇಕು. ಇಂತಹ ಸಾಮಾಜಿಕ ಕಳಕಳಿಯೊಂದಿಗೆ ಸಮಿತಿಯವರು ನಡೆಸುವ ಸಾಮೂಹಿಕ ವಿವಾಹ ಮಹೋತ್ಸವಗಳು ನಿಜಕ್ಕೂ ಶ್ಲಾಘನೀಯ’ ಎಂದು ಹೇಳಿದರು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಪಾಟೀಲ ಮಾತನಾಡಿ,ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು.
ಸಾಮೂಹಿಕ ವಿವಾಹ ಬಡವರ ಮದುವೆ ಎಂದು ಭಾವಿಸುವುದು ತಪ್ಪು. ಸಹಸ್ರಾರು ಜನಲ,ಭಕ್ತರ, ಮಠಾಧೀಶರ ಆಶಿರ್ವಾದದೊಂದಿಗೆ ಬಂಧನಕ್ಕೊಳಗಾಗುವ ಭಾಗ್ಯ. ಜೀವನದ ಸಂಭ್ರಮದ ಕ್ಷಣವಾಗಿದೆ ಎಂದು ಹೇಳಿದರು.
ಹಾಲಕೆರೆ ಸಂಸ್ಥಾನ ಮಠದ ಮುಪ್ಪಿನ ಬಸವಲಿಂಗ ಶ್ರೀಗಳು ಆಶಿರ್ವಚನ ನೀಡಿ, ಬಡವರ ಪಾಲಿನ ವರದಾನವಾಗಿರುವ ಸಾಮೂಹಿಕ ವಿವಾಹ ಪರಂಪರೆ ಇಂದಿನಿದಲ್ಲ, ಅದು ಬಸವಾದಿ ಶರಣರು ಹಾಕಿಕೊಟ್ಟ ಸನ್ಮಾರ್ಗ ಎಂದರು ‘ವರದಕ್ಷಿಣೆ ಸಾಮಾಜಿಕ ಪಿಡುಗು ಆಗಿದ್ದು, ಅದನ್ನ ಪಡೆಯುವುದು ಬಿಟ್ಟು, ತಿರಸ್ಕರಿಸುವ ಗುಣ ಬೆಳಸಿಕೊಳ್ಳಬೇಕು. ಅನಾರೋಗ್ಯ, ಚಟ ಹೊಂದಿದವರು, ದುಡಿಮೆ ಇಲ್ಲದ ವ್ಯಕ್ತಿಗಳು ಮದುವೆ ತ್ಯಜಿಸುವುದು ಒಳಿತು’ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗುಲಗಂಜಿಮಠದ ಗುರುಪಾದ ಮಹಾಸ್ವಾಮಿಗಳು ಮಾತನಾಡಿ, ‘ಉಚಿತ ಸಾಮೂಹಿಕ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಆರ್ಥಿಕ ಸಧೃಢ ಸಮಾಜದ ನಿರ್ಮಾಣಕ್ಕೆ ಕೈ ಜೋಡಿಸಬೇಕು. ನವ ಜೋಡಿಯು ಹೊಂದಾಣಿಕೆ ಜೀವನ ನಡೆಸುವ ಮೂಲಕ ಮಾದರಿಯಾಗಬೇಕು’ ಎಂದು ಹೇಳಿದರು.

ವೇದಿಕೆಯಲ್ಲಿ ನಿಡಗುಂದಿಕೊಪ್ಪದ ಚನ್ನಬಸವ ಮಹಾಸ್ವಾಮಿಗಳು, ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು, ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯರು, ಬನವಾಸಿಯ ಶಿವಲಿಂಗ ಮಹಾಸ್ವಾಮಿಗಳು ಸೇರಿದಂತೆ ಅನೇಕರು ಇದ್ದರು.
ಕಾರ್ಯಕ್ರಮವನ್ನು ತಾಲೂಕು ಮಹರ್ಷಿ ವಾಲ್ಮೀಕಿ ಸಮಾಜದ ಅಧ್ಯಕ್ಷ ಬಸವರಾಜ ತಳವಾರ ನಿರೂಪಿಸಿ, ವಂದಿಸಿದರು.
